Peenya Flyover: ಇಂದಿನಿಂದ ಪೀಣ್ಯ ಮೇಲ್ಸೇತುವೆಯ ಮೇಲೆ ಎಲ್ಲ ರೀತಿಯ ವಾಹನಗಳ ಸಂಚಾರ ಆರಂಭ

Peenya Flyover: ಮೂರು ವರ್ಷಗಳಿಂದ ಬಂದ್‌ ಆಗಿದ್ದ ತುಮಕೂರು ರಸ್ತೆಯ ಪೀಣ್ಯ ಮೇಲ್ಶೇತುವೆ ಇಂದಿನಿಂದ ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ. ತುಮಕೂರು ರಸ್ತೆಯ ಉದ್ದಕ್ಕೂ ತನ್ನ ಆಯಕಟ್ಟಿನ ಸ್ಥಳದೊಂದಿಗೆ, ಪೀಣ್ಯ ಫ್ಲೈಓವರ್ ಟ್ರಾಫಿಕ್ ಹರಿವನ್ನು ಸುಗಮಗೊಳಿಸುವಲ್ಲಿ ಮತ್ತು ದೈನಂದಿನ ಸಾವಿರಾರು ಪ್ರಯಾಣಿಕರಿಗೆ ಪ್ರಯಾಣದ ಸಮಯವನ್ನು ಕಡಿಮೆ ಮಾಡುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.ಬೆಂಗಳೂರಿನಿಂದ 25 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಈ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ.

Peenya Flyover

ಬೆಂಗಳೂರು: ಇಂದಿನಿಂದ ಪೀಣ್ಯ ಮೇಲ್ಸೇತುವೆಯಲ್ಲಿ ಎಲ್ಲ ಮಾದರಿಯ ವಾಹನಗಳ ಸಂಚಾರ ಆರಂಭವಾಗಲಿದ್ದು.ಇದಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಟ್ರಾಫಿಕ್ ಪೊಲೀಸರು ಹಸಿರು ನಿಶಾನೆ ತೋರಿಸಿದ್ದಾರೆ.

ವಾರದಲ್ಲಿ 6 ದಿನ ಪೀಣ್ಯ ಮೇಲ್ಸೇತುವೆಯಲ್ಲಿ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು ವಿಶೇಷ ದುರಸ್ತಿ ಕಾಮಗಾರಿ ಇನ್ನೂ ಪ್ರಗತಿಯಲ್ಲಿರುವುದರಿಂದ ಪ್ರತಿ ಶುಕ್ರವಾರ ಮುಂಜಾನೆ 6 ಗಂಟೆಯಿಂದ ಶನಿವಾರ ಮುಂಜಾನೆ 6 ಗಂಟೆಯವರೆಗೆ ಒಂದು ದಿನ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಭಾರಿ ವಾಹನಗಳು ಮಾತ್ರ ಮೇಲ್ಸೇತುವೆ ಎಡಪಥದಲ್ಲಿ ಗರಿಷ್ಠ 40 ಕಿ.ಮೀ ವೇಗ ಮಿತಿಯಲ್ಲಿ ಸಂಚರಿಸಬೇಕು ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೂಚಿಸಿದೆ.

 ಬೆಂಗಳೂರಿನ ಉತ್ತರ ಭಾಗದ, ತುಮಕೂರು ರಸ್ತೆಯಲ್ಲಿರುವ ಉತ್ತರ ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸುವ ಈ ಮೇಲ್ಸೇತುವೆ 15 ಮೀಟರ್ ಅಗಲ 4.2 ಕಿಮೀ ಉದ್ದವಿದೆ. 2021ರ ಡಿಸೆಂಬರ್‌ ನಿಂದ ಈ ಮೇಲ್ಸೇತುವೆ ಮೇಲೆ ಬಸ್‌ ಹಾಗೂ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು.  ಇದರಿಂದ ತುಮಕೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗುತ್ತಿದ್ದು.ಪ್ರಿ ಸ್ಟ್ರೆಸ್ಡ್‌ ಕೇಬಲ್‌ ಗಳು ತುಕ್ಕು ಹಿಡಿದಿದ್ದು, ದುರ್ಬಲಗೊಂಡಿದ್ದವು. ಜತೆಗೆ ತೇವಾಂಶ ಮತ್ತು ಸೂರ್ಯನ ಬೆಳಕಿನಿಂದಲೂ ಹಾನಿಗೊಳಗಾಗಿದ್ದರಿಂದ ಮೇಲ್ಸೇತುವೆ ದುರ್ಬಲವಾಗಿತ್ತು.

ಫ್ಲೈಓವರ್‌ನಲ್ಲಿ ಪ್ರಿಸ್ಟ್ರೆಸ್ಡ್ ತುಕ್ಕು ಹಿಡಿದ ಹಿನ್ನೆಲೆಯಲ್ಲಿ ರಿಪೇರಿ ಮಾಡುವ ಅಗತ್ಯವಿತ್ತು. ಹೀಗಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ 38.5 ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ ಕೇಬಲ್‌ಗಳ ಅಳವಡಿಕೆ ಕಾರ್ಯ ನಡೆದಿದೆ.

ಇದನ್ನೂ ಓದಿ: ಬೆಂಗಳೂರಿನ ಪಿಜಿಯಲ್ಲಿ ಯುವತಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ಮಧ್ಯ ಪ್ರದೇಶದಲ್ಲಿ ಅರೆಸ್ಟ್

ವಾಹನ ದಟ್ಟಣೆಗೆ ಮುಕ್ತಿ

ಪೀಣ್ಯ ಫ್ಲೈಓವರ್ ಮೇಲೆ ನಿರ್ಬಂಧವಿದ್ದರಿಂದ ಕಳೆದ ಮೂರು ವರ್ಷಗಳಿಂದ ಕೆಳಗಿನ ರಸ್ತೆಯಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿತ್ತು. ಇದರಿಂದ ವಾಹನ ಸವಾರರು ಪರದಾಡುತ್ತಿದ್ದರು.ಈ ಫ್ಲೈಓವರ್‌ ವಿವಿಧ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಬಹುಮುಖ್ಯ ಮಾರ್ಗ. ಪ್ರಯಾಣಿಕರು ಮತ್ತು ಸರಕು ಸಾಧಿಗಣೆ ವಾಹನಗಳೂ ಸೇರಿದಂತೆ ಸಾವಿರಾರು ವಾಹನಗಳಿಗೆ ಪ್ರಮುಖ ಸಂಪರ್ಕ ಕೊಂಡಿಯಾಗಿತ್ತು.ಎನ್‌ಎಚ್‌ಎಐ ಕಳೆದ ವರ್ಷ 38.5 ಕೋಟಿ ರೂಪಾಯಿಯಲ್ಲಿ ರಿಪೇರಿ ಕಾರ್ಯವನ್ನು ಪ್ರಾರಂಭಿಸಿತು. ಪ್ರತಿ ಸ್ಪ್ಯಾನ್‌ನಲ್ಲಿ ಎರಡು ಕೇಬಲ್‌ಗಳನ್ನು ಹೆಚ್ಚುವರಿ ಸ್ಲಾಟ್‌ಗಳಲ್ಲಿ ಸೇರಿಸಲು ಮತ್ತು ಮೇಲ್ಸೇತುವೆಯನ್ನು ಬಲಪಡಿಸಲು ಒತ್ತು ನೀಡಿತ್ತು.

ಬಾಕಿ ಕಾಮಗಾರಿಗೆ ಒಂದು ವರ್ಷ ಬೇಕು!

ಫ್ಲೈ ಓವರ್‌ನ 8ನೇ ಮೈಲಿ ಜಂಕ್ಷನ್‌ ಹತ್ತಿರದಲ್ಲಿರುವ 101-102ನೇ ಪಿಲ್ಲರ್‌ಗಳ ಮಧ್ಯದಲ್ಲಿನ 3 ಕೇಬಲ್‌ಗಳು ಬಾಗಿದ್ದರಿಂದ 2021ರ ಡಿಸೆಂಬರ್‌ 25ರಿಂದ ಮೇಲ್ಸೇತುವೆಯಲ್ಲಿ ಎಲ್ಲಬಗೆಯ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಆ ನಂತರ ತಜ್ಞರ ತಂಡ ಪರಿಶೀಲನೆ ನಡೆಸಿ, ಹೆಚ್ಚಿನ ಪ್ರಮಾಣದಲ್ಲಿ ಭಾರೀ ವಾಹನಗಳು ಸಂಚರಿಸಿದ್ದರಿಂದಲೇ ಕೇಬಲ್‌ಗಳು ಬಾಗಿವೆ ಎಂದು ವರದಿ ನೀಡಿತ್ತು.

ಈ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ ಪ್ರತಿ ಸ್ತಂಭದ ನಡುವೆ 240 ಹೊಸ ಕೇಬಲ್‌ಗಳನ್ನು ಅಳವಡಿಸಲಾಗಿದೆ, ಆದರೆ ಎರಡನೇ ಹಂತದಲ್ಲಿ ಪ್ರತಿ ಎರಡು ಕಂಬಗಳ ನಡುವೆ 1200 ಕೇಬಲ್‌ಗಳನ್ನು ಬದಲಾಯಿಸಲಾಗುತ್ತದೆ.  300 ಅನ್ನು ಈಗಾಗಲೇ ಬದಲಾಯಿಸಲಾಗಿದೆಯಾದರೂ, ಉಳಿದಿರುವ ಕೇಬಲ್ ಅಳವಡಿಕೆ ಕಾರ್ಯವು ಪೂರ್ಣಗೊಳ್ಳಲು ಇನ್ನೊಂದು ವರ್ಷ ತೆಗೆದುಕೊಳ್ಳುತ್ತದೆ ಎಂದು ನಿರೀಕ್ಷಿಸಲಾಗಿದೆ.

Latest Trending

Follow us on Instagram Bangalore Today

Leave a Reply

Your email address will not be published. Required fields are marked *