Bangalore Bandh: ಬೆಂಗಳೂರು ಬಂಧ್ ಖಾಸಗಿ ಸಾರಿಗೆ ಸಂಸ್ಥೆಗಳ ಬೇಡಿಕೆಗಳೇನು?

Bangalore Bandh: ರಾಜ್ಯ ರಾಜಧಾನಿಯಲ್ಲಿ, 11 ಸೆಪ್ಟೆಂಬರ್ 2023 ರಂದು, ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟವು ಬೆಂಗಳೂರು ನಗರದಲ್ಲಿ ಬಂದ್‌ಗೆ ಕರೆ ನೀಡಿದೆ ಮತ್ತು ಬೈಕ್ ಟ್ಯಾಕ್ಸಿ ಸೇವೆಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಜಾರಿಗೆ ತರಲು ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದೆ.

Bangalore Bandh

Bangalore, September 11; ಸೋಮವಾರ, ಸೆಪ್ಟೆಂಬರ್ 11 ರಂದು, ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟವು ಸಂಘಟನೆಯ ಹಲವಾರು ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಒತ್ತಾಯಿಸಿ ಬೆಂಗಳೂರು ನಗರ ಬಂದ್‌ಗೆ ಕರೆ ನೀಡಿದ್ದು, ಇದೀಗ ಕ್ಯಾಬ್ ಮತ್ತು ಆಟೋ ಚಾಲಕರು ಸಹ ತಮ್ಮ ವಾಹನಗಳನ್ನು ನಿಲ್ಲಿಸಿ ಬೆಂಗಳೂರು ಬಂದ್‌ಗೆ ಬೆಂಬಲ ನೀಡಿದ್ದಾರೆ.

Read This, ಸೆ. 11ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದೆ

ಖಾಸಗಿ ಸಾರಿಗೆ ಸಂಸ್ಥೆಗಳ ಬೇಡಿಕೆಗಳೇನು?

ಚಾಲಕರಿಗೆ ಮಾಸಿಕ 10 ಸಾವಿರ ರೂ. ಪರಿಹಾರ ಧನ ನೀಡಬೇಕು!

ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟವು ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಇಟ್ಟಿದ್ದು, ಈ ಪೈಕಿ ಚಾಲಕರಿಗೆ ಮಾಸಿಕ ಹತ್ತು ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.

ಶಕ್ತಿ ಯೋಜನೆಯಿಂದ ಆಗುವ ನಷ್ಟವನ್ನು ಎದುರಿಸಲು ಖಾಸಗಿ ವಾಹನ ಚಾಲಕರಿಗೆ ನೆರವಾಗುವ ಬೇಡಿಕೆ ಇದಾಗಿದೆ,

ಬೈಕ್ ಟ್ಯಾಕ್ಸಿ ಸೇವೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು!

ನಗರದಲ್ಲಿ ಬೈಕ್ ಟ್ಯಾಕ್ಸಿಗಳ ಬಳಕೆ ಹೆಚ್ಚುತ್ತಿದ್ದು, ಇದರಿಂದ ಆಟೋ ಚಾಲಕರಿಗೆ ತೀವ್ರ ಪೆಟ್ಟು ಬೀಳುತ್ತಿದ್ದು, ಬೆಂಗಳೂರು ನಗರದಲ್ಲಿ ರಾಪಿಡೋ, ಉಬರ್ ನಂತಹ ಬೈಕ್ ಟ್ಯಾಕ್ಸಿಗಳ ಸೇವೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂಬುದು ಸಂಘಟನೆಯ ಮತ್ತೊಂದು ಆಗ್ರಹವಾಗಿದೆ.

ಅಸಂಘಟಿತ ವಾಣಿಜ್ಯ ಚಾಲಕರ ಮತ್ತು ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು!

ಖಾಸಗಿ ವಾಹನ ಚಾಲಕರ ಕಲ್ಯಾಣ ಮತ್ತು ಅಭಿವೃದ್ಧಿಗೆ ಒತ್ತು ನೀಡಲು ಅಸಂಘಟಿತ ವಾಣಿಜ್ಯ ಚಾಲಕರು ಮತ್ತು ಸಾರಿಗೆ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವುದು ಮತ್ತೊಂದು ಪ್ರಮುಖ ಬೇಡಿಕೆಯಾಗಿದೆ.

ವೈಟ್ ಬೋರ್ಡ್‌ ವಾಹನಗಳಲ್ಲಿ ಬಾಡಿಗೆ ಓಡಿಸುವುದು ಸ್ಥಗಿತಗೊಳಿಸಬೇಕು!

ನಗರದಲ್ಲಿ ಅನೇಕ ವಾಹನಗಳ ಮಾಲೀಕರು ಅಕ್ರಮವಾಗಿವೈಟ್ ಬೋರ್ಡ್ ವಾಹನಗಳಲ್ಲಿ ಬಾಡಿಗೆ ಓಡಿಸುವುದು ನಡೆಯುತ್ತಿದೆ, ಇದರಿಂದ ಖಾಸಗಿ ವಾಹನ ಸವಾರರಿಗೆ ಆರ್ಥಿಕವಾಗಿ ತೊಂದರೆಯಾಗುತ್ತಿದ್ದು, ವೈಟ್ ಬೋರ್ಡ್ ವಾಹನಗಳಲ್ಲಿ ಬಾಡಿಗೆ ಓಡಿಸುವುದು ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಇದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು.

Read this, ಬೆಂಗಳೂರಿನಲ್ಲಿ ಡೆಂಗ್ಯೂ ತಡೆಗಟ್ಟಲು ಸರ್ಕಾರ ಕೈಗೊಂಡಿರುವ ಕ್ರಮಗಳು ಇಲ್ಲಿವೆ

ಚಾಲಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಬೇಕು!

ಸರ್ಕಾರ ವಿಶೇಷವಾಗಿ ಖಾಸಗಿ ವಾಹನ ಚಾಲಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವ ಮೂಲಕ ಚಾಲಕರ ಮಕ್ಕಳು ವಿದ್ಯಾಭ್ಯಾಸದಲ್ಲಿ ಪ್ರಗತಿ ಸಾಧಿಸಲು ಸಹಕರಿಸಬೇಕು ಎಂಬ ಆಗ್ರಹ ಕೇಳಿ ಬಂದಿದೆ.

ಓಲಾ, ಉಬರ್ ಸೇರಿದಂತೆ ಆಪ್ ಆಧಾರಿತ ಸೇವೆಗಳನ್ನು ನಿಷೇಧಿಸಬೇಕು! 

ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಗಳಾದ ಓಲಾ ಮತ್ತು ಉಬರ್‌ಗಳು ಹೆಚ್ಚು ಬಳಕೆಯಾಗುತ್ತಿದ್ದು, ಇದರಿಂದ ಸಾಮಾನ್ಯ ಖಾಸಗಿ ವಾಹನ ಚಾಲಕರು ತೊಂದರೆ ಅನುಭವಿಸುತ್ತಿದ್ದಾರೆ ಹೀಗಾಗಿ ಕೂಡಲೇ ಅವುಗಳನ್ನು ನಿಷೇಧಿಸುವಂತೆ ಸರ್ಕಾರಕ್ಕೆ ಮಹತ್ವದ ಬೇಡಿಕೆಯನ್ನು ಮುಂದಿಟ್ಟಿದೆ.

ಖಾಸಗಿ ವಾಹನಗಳನ್ನು ಸರ್ಕಾರ ಬಾಡಿಗೆಗೆ ಪಡೆಯಬೇಕು! 

ಕರ್ನಾಟಕ ರಾಜ್ಯ ಸರ್ಕಾರವು ಶಕ್ತಿ ಯೋಜನೆ ಜಾರಿಗೊಳಿಸಿದ ನಂತರ, ಖಾಸಗಿ ವಾಹನಗಳು ತೀವ್ರ ನಷ್ಟವನ್ನು ಎದುರಿಸುತ್ತಿವೆ, ಹೀಗಾಗಿ ಸರ್ಕಾರವು ಖಾಸಗಿ ವಾಹನಗಳನ್ನು ಕಿಲೋಮೀಟರ್ ಆಧಾರದ ಮೇಲೆ ಬಾಡಿಗೆಗೆ ಪಡೆಯುವ ಮೂಲಕ ಖಾಸಗಿ ವಾಹನಗಳ ಮಾಲೀಕರು ಮತ್ತು ಚಾಲಕರ ಆರ್ಥಿಕ ಸುಧಾರಣೆಗೆ ಸಹಕರಿಸಬೇಕು ಎಂದು ಒತ್ತಾಯಿಸಿದರು.

ಅಕ್ರಮವಾಗಿ, ಖಾಸಗಿ ವಾಹನಗಳ ಜಪ್ತಿ ಮಾಡುವ ಫೈನಾನ್ಸ್ ವಿರುದ್ಧ ಕ್ರಮ ಕೈಗೊಳ್ಳಬೇಕು!

ಅಕ್ರಮವಾಗಿ ಖಾಸಗಿ ವಾಹನಗಳನ್ನು ಜಪ್ತಿ ಮಾಡುವ ಫೈನಾನ್ಸ್ ಸಂಸ್ಥೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು, ಆ ಮೂಲಕ ಮಾಸಿಕ ಕಂತು ಕಟ್ಟದ ವಾಹನಗಳನ್ನು ಸೂಕ್ತ ಕಾನೂನು ಮೂಲಕ ಜಪ್ತಿ ಮಾಡಲು ಹಣಕಾಸು ಸಂಸ್ಥೆಗಳು ಕ್ರಮ ಕೈಗೊಳ್ಳಬೇಕು ಎಂಬುದು ಅವರ ಅಂತಿಮ ಆಗ್ರಹವಾಗಿದೆ.

Latest Trending

Follow us on Instagram Bangalore Today

Leave a Reply

Your email address will not be published. Required fields are marked *