Bangalore Fire Accident: ಬೆಂಗಳೂರಿನ 3 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ, ಬಟ್ಟೆ & ಅಪಾರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ!

Bangalore Fire Accident: ಬೆಂಗಳೂರಿನ ಮಾರತನಹಳ್ಳಿಯಲ್ಲಿ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದ ಟ್ರಾನ್ಸ್ ಫಾರ್ಮರ್ ಕೂಡ ಬೆಂಕಿಗೆ ಆಹುತಿಯಾಗಿದೆ. ನಗರದ ಮಾರತ್ತ​​​​​​ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ.

Bangalore Fire Accident

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಹಲವು ಅಗ್ನಿ ಅನಾಹುತಗಳು ಸಂಭವಿಸುತ್ತಿದ್ದು, ಇಂತದ್ದೊಂದೇ ಮತ್ತೊಂದು ಅಗ್ನಿ ದುರಂತ ನಿನ್ನೆ ರಾತ್ರಿ ಬೆಂಗಳೂರಿನ ಮಾರತನಹಳ್ಳಿ ವ್ಯಾಪ್ತಿಯಲ್ಲಿ ಬರುವ ಬ್ರಿಡ್ಜ್ ಬಳಿ ಇರುವಂತಹ ಮೂರು ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದೆ.

ನಿನ್ನೆ ರಾತ್ರಿ 11.45ರ ಸುಮಾರಿಗೆ ಈ ಬೆಂಕಿ ಅವಘಡವೂ ಸಂಭವಿಸಿದೆ. ಲೂಯಿಸ್ ಫಿಲಿಪ್ ಬಟ್ಟೆ ಶೋರೂಮ್‌ನಲ್ಲಿ ಕಾಣಿಸಿಕೊಂಡ ಬೆಂಕಿ ನಂತರ, ಅದು ಅಕ್ಕಪಕ್ಕದ ಅಂಗಡಿಗಳು ಮತ್ತು ಟ್ರಾನ್ಸ್‌ಫಾರ್ಮರ್‌ಗಳಿಗೆ ಹರಡಿತು. ಈ ವೇಳೆ ಕಟ್ಟಡದಲ್ಲಿದ್ದ 4 ಮಂದಿ ಬೆಂಕಿ ಹಚ್ಚಿಕೊಂಡ ಕಟ್ಟಡದಿಂದ ಪಕ್ಕದ ಕಟ್ಟಡಕ್ಕೆ ಹಾರಿದ್ದಾರೆ. ಒಬ್ಬನನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ್ದಾರೆ ಹಾಗೂ ಸತತ ಎರಡುವರೆ ಗಂಟೆಗಳ ಕಾರ್ಯಾಚರಣೆ ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಡಿಸೆಂಬರ್ ಅಂತ್ಯದವರೆಗೆ ರಾಜ್ಯದ ಕೆಲವು ರೈಲು ಸಂಚಾರ ರದ್ದು, ಮಾರ್ಗ ಯಾವುವು & ಕಾರಣವೇನು? ಸಂಪೂರ್ಣ ವಿವರ ಇಲ್ಲಿ ನೋಡಿ

ಅಪಾರ ಮೌಲ್ಯದ ಬಟ್ಟೆ ಮತ್ತು ಇತರ ವಸ್ತುಗಳು ಬೆಂಕಿಗೆ ಆಹುತಿ!

ನಗರದ ಮಾರತ್ತನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸೇತುವೆ ಬಳಿ ಇರುವ ಮೂರು ಅಂತಸ್ತಿನ ಕಟ್ಟಡಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು, ಅಂಗಡಿಯಲ್ಲಿದ್ದ ಬೆಲೆಬಾಳುವ ಬಟ್ಟೆ ಹಾಗೂ ಇತರೆ ವಸ್ತುಗಳು ಸುಟ್ಟು ಕರಕಲಾಗಿವೆ.

ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದ ಅಗ್ನಿಶಾಮಕ ಸಿಬ್ಬಂದಿ ಗಾಯಗೊಂಡಿದ್ದು, ಬಟ್ಟೆ ಶೋರೂಂನ ಸ್ಟಿಚ್ ಬೋರ್ಡ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಚಿನ್ನದ ಬೆಲೆಯಲ್ಲಿ ದಿಢೀರ್ ಏರಿಕೆ!, ಇಂದಿನ ಚಿನ್ನ & ಬೆಳ್ಳಿ ದರ ಹೇಗಿದೆ ನೋಡಿ!

Latest Trending

Follow us on Instagram Bangalore Today

Leave a Reply

Your email address will not be published. Required fields are marked *