Private Bus Caught On Fire: ಬೆಂಗಳೂರಿನಿಂದ ವಿಜಯಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ ಸುಟ್ಟು ಭಸ್ಮ, ಪ್ರಯಾಣಿಕರು ಸೇಫ್

Private Bus Caught On Fire near Vijayapura: ಬೆಂಗಳೂರಿನಿಂದ ವಿಜಯಪುರಕ್ಕೆ ಬರುತ್ತಿದ್ದ ಖಾಸಗಿ ಬಸ್‌ಗೆ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಬೆಳಗಿನ ಜಾವ ಬೆಂಕಿ ತಗುಲಿ ಹೊತ್ತಿ ಉರಿದಿದ್ದು, ಟೈರ್ ಒಡೆದ ಪರಿಣಾಮ ಬಸ್‌ಗೆ ತಕ್ಷಣ ಬೆಂಕಿ ತಗುಲಿ ಕೇವಲ 10 ನಿಮಿಷದಲ್ಲಿ ಸುಟ್ಟು ಭಸ್ಮವಾಗಿದೆ. ಸದ್ಯ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಂಪೂರ್ಣ ವಿವರಗಳನ್ನು ಇಲ್ಲಿ ನೋಡಿ!

Private Bus Caught On Fire

ಡಿ.15ರಂದು ಶುಕ್ರವಾರ ಬೆಳಗಿನ ಜಾವ ಬೆಂಗಳೂರಿನಿಂದ ವಿಜಯಪುರಕ್ಕೆ ಬರುತ್ತಿದ್ದ ಖಾಸಗಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು, ಹಾಗೂ ಬಸ್ ಬೆಂಕಿಗೆ ಆಹುತಿಯಾಗಿದೆ, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.

Vijayapura, Dec 15: ವಿಜಯಪುರ ತಾಲೂಕಿನ ಹಿಟ್ಟನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಜನತಾ ಟ್ರಾವೆಲ್ಸ್ ಮಾಲೀಕತ್ವದ ಖಾಸಗಿ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಬಸ್ ನ ಟೈರ್ ಸ್ಫೋಟಗೊಂಡಿದೆ. ಚಾಲಕ ಬಸ್ಸನ್ನು ನಿಯಂತ್ರಣಕ್ಕೆ ತಂದು ತಕ್ಷಣ ನಿಲ್ಲಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಬಳಿಕ ಏಕಾಏಕಿ ಬಸ್ ಗೆ ಬೆಂಕಿ ತಗುಲಿ ಬಸ್ ಬೆಂಕಿಗೆ ಆಹುತಿಯಾಗಿದೆ, ಸಂಭವಿಸಬಹುದಾದ ಭಾರಿ ಪ್ರಾಣಹಾನಿ ಅನಾಹುತವೊಂದು ತಪ್ಪಿ ಹೋಗಿದ್ದು, ಈ ಅನಿಶ್ಚಿತ ಘಟನೆಯಿಂದ ಪ್ರಯಾಣಿಕರು ಕಂಗಾಲಾಗಿದ್ದಾರೆ.

ಇದನ್ನೂ ಓದಿ: ಬೆಂಗಳೂರು- ಮೈಸೂರು ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ, ಈ ಓಡಾಡಲಿದೆ ಪ್ರತಿ 10 ನಿಮಿಷಕ್ಕೊಂದು ರೈಲು!

ಬೆಲೆಬಾಳುವ ವಸ್ತುಗಳಿಗೆ ಬೆಂಕಿ!

ಬಸ್ಸಿನ ಟಯರ್ ಬ್ಲಾಸ್ಟ್ ಆದ ಕಾರಣ ಗಾಬರಿಯಿಂದ ಬಸ್ಸಿನಿಂದ ಅವಸರದಲ್ಲಿ ಲಗೇಜ್ ತೆಗೆದುಕೊಂಡು ಹೋಗಲು ಅವಕಾಶವಿಲ್ಲದ ಕಾರಣ ಪ್ರಯಾಣಿಕರ ಸಾಮಾನುಗಳು ಬೆಂಕಿ ಅವಘಡಕ್ಕೆ ಸಿಲುಕಿ ಎಲ್ಲಾ ಲಗೇಜುಗಳು ಸುಟ್ಟು ಕರಕಲಾಗಿವೆ. ಪ್ರಯಾಣಿಕರ ಬೆಲೆಬಾಳುವ ವಸ್ತುಗಳು, ಬಟ್ಟೆ, ನಗದು ಸುಟ್ಟು ಕರಕಲಾಗಿದ್ದು, ಪ್ರಯಾಣಿಕರು ಆತಂಕಗೊಂಡಿದ್ದು, ವಿಜಯಪುರ ಗ್ರಾಮಾಂತರ ಪೊಲೀಸರು  ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ, ಮುಂದಿನ ಕ್ರಮ ಕೈಗೊಂಡಿದ್ದು, ಈ ಕುರಿತು ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Latest Trending

Follow us on Instagram Bangalore Today

Leave a Reply

Your email address will not be published. Required fields are marked *