Yuva Nidhi Scheme: ಯುವ ನಿಧಿ ಯೋಜನೆಗೆ ಅರ್ಜಿ ಆಹ್ವಾನ & ಭತ್ಯೆ ಹಣ ಖಾತೆಗೆ ವರ್ಗಾವಣೆ ಯಾವಾಗ ? ಇಲ್ಲಿದೆ ಸಂಪೂರ್ಣ ವಿವರ!

Yuva Nidhi Scheme Application: ಕರ್ನಾಟಕ ರಾಜ್ಯ ಸರ್ಕಾರವು ಮುಖ್ಯವಾಗಿ 5 ಖಾತರಿಗಳನ್ನು ಘೋಷಿಸಿದ್ದು, ಅವುಗಳಲ್ಲಿ ನಾಲ್ಕು ಖಾತರಿಗಳನ್ನು ಈಗಾಗಲೇ ಜಾರಿಗೊಳಿಸಲಾಗಿದೆ ಮತ್ತು ಈಗ ಸರ್ಕಾರವು ನಿರುದ್ಯೋಗ ಸಮಸ್ಯೆಯನ್ನು ಎದುರಿಸುತ್ತಿರುವ ಡಿಪ್ಲೊಮಾ ಮತ್ತು ಪದವೀಧರ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ನಿರುದ್ಯೋಗ ಭತ್ಯೆಯ ರೂಪದಲ್ಲಿ 2 ವರ್ಷಗಳವರೆಗೆ ನಿರುದ್ಯೋಗ ಭತ್ಯೆ ನೀಡಲು ಮುಂದಾಗಿದೆ.  ಇದೀಗ ಈ ಯೋಜನೆಗೆ ಅರ್ಜಿ ಆಹ್ವಾನಿಸುವ ದಿನಾಂಕ ಹಾಗೂ ಭತ್ಯೆಹಣ ಖಾತೆಗೆ ವರ್ಗಾವಣೆ ದಿನಾಂಕ ಹಾಗು ಮತ್ತಷ್ಟು ಸಂಪೂರ್ಣ ವಿವರಗಳನ್ನು ಇಲ್ಲಿ ನೋಡಿ!

Yuva Nidhi Scheme Application

ಕರ್ನಾಟಕದಲ್ಲಿ 2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ, ಕಾಂಗ್ರೆಸ್ ಪಕ್ಷವು ಐದು ಪ್ರಮುಖ ಭರವಸೆಗಳನ್ನು ಜಾರಿಗೆ ತರುವುದಾಗಿ ಭರವಸೆ ನೀಡಿತ್ತು, ಅವುಗಳಲ್ಲಿ ಯುವ ನಿಧಿ ಅವುಗಳಲ್ಲಿ ಒಂದು. ಈ ಯೋಜನೆಯಡಿ, ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೊಮಾ ವ್ಯಾಸಂಗ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಎರಡು ವರ್ಷಗಳವರೆಗೆ ಮಾಸಿಕ ಭತ್ಯೆ ನೀಡುವ ಯೋಜನೆಯನ್ನು ಘೋಷಿಸಲಾಯಿತು.

ಇದನ್ನೂ ಓದಿ: ರಾಜ್ಯದ ಹಲವೆಡೆ ಮಳೆ ಸಾಧ್ಯತೆ, ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ನೋಡಿ!

ಮತ್ತು ಈಗ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಿದ 10 ತಿಂಗಳ ನಂತರ ಯುವ ನಿಧಿ ಯೋಜನೆಗೆ ಚಲನೆಯನ್ನು ನೀಡಲು ಮುಂದಾಗಿದ್ದು, ಈ ಯೋಜನೆಯ ನೋಂದಣಿ ಪ್ರಕ್ರಿಯೆಯು ಡಿಸೆಂಬರ್ 21 ರಿಂದ ಪ್ರಾರಂಭವಾಗಲಿದೆ ಮತ್ತು ಅಭ್ಯರ್ಥಿಗಳು ಅರ್ಜಿಸಲ್ಲಿಸುವುದರ ಮೂಲಕ ಈ ಯೋಜನೆಯ ಲಾಭವನ್ನು ಪಡೆಯಬಹುದು, ರಾಜ್ಯ ಸರ್ಕಾರವು ಯುವ ನಿಧಿ ಯೋಜನೆಯನ್ನು ಅಧಿಕೃತವಾಗಿ ಜನವರಿ 2024 ರಲ್ಲಿ ಪ್ರಾರಂಭಿಸುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಹೇಳಿಕೆ ನೀಡಿದ್ದಾರೆ.

ನಿರುದ್ಯೋಗಿ ಪದವೀಧರರಿಗೆ ಮಾಸಿಕ 3000 ರೂ ಭತ್ಯೆ.

ಯಾವುದೇ ವಿಷಯದಲ್ಲಿ ಪದವಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಬಹುದು ಮತ್ತು ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ನಿರುದ್ಯೋಗ ಭತ್ಯೆಯ ರೂಪದಲ್ಲಿ ಸರ್ಕಾರದಿಂದ ಎರಡು ವರ್ಷಗಳವರೆಗೆ ಪ್ರತಿ ತಿಂಗಳು 3000 ರೂ.

ಡಿಪ್ಲೊಮಾ ಪಾಸ್ ನಿರುದ್ಯೋಗಿಗಳಿಗೆ ಮಾಸಿಕ 1500 ರೂ. ಭತ್ಯೆ

ಡಿಪ್ಲೊಮಾ ಟೆಕ್ನಿಕಲ್ ಕೋರ್ಸ್ ಮುಗಿಸಿದ ನಿರುದ್ಯೋಗಿಗಳಿಗೆ ಎರಡು ವರ್ಷಗಳ ಕಾಲ ನಿರುದ್ಯೋಗ ಭತ್ಯೆಯಾಗಿ ಮಾಸಿಕ 1500 ರೂ ನೀಡಲಾಗುತ್ತದೆ.

ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳೇನು?

  • ಅರ್ಜಿದಾರರು ಕರ್ನಾಟಕದ ನಿವಾಸಿಯಾಗಿರಬೇಕು
  • ಅರ್ಜಿದಾರರು ಪದವೀಧರರಾಗಿರಬೇಕು ಅಥವಾ ಡಿಪ್ಲೊಮಾ ಹೊಂದಿರುವವರಾಗಿರಬೇಕು
  • ಅರ್ಜಿದಾರರು 2022- 2023 ರಲ್ಲಿ ಪದವಿ ಅಥವಾ ಡಿಪ್ಲೊಮಾವನ್ನು ತೇರ್ಗಡೆ ಹೊಂದಿರಬೇಕು
  • ಅರ್ಜಿದಾರರು ಪದವಿ ಅಥವಾ ಡಿಪ್ಲೊಮಾ ತೇರ್ಗಡೆಯಾದ ದಿನಾಂಕದ ನಂತರ ಕನಿಷ್ಠ 180 ದಿನಗಳವರೆಗೆ ನಿರುದ್ಯೋಗಿಯಾಗಿರಬೇಕು.

ಯೋಜನೆಗೆ ಬೇಕಾದ ದಾಖಲೆಗಳು

  • ಕರ್ನಾಟಕದ ನಿವಾಸಿ ಎಂಬ ಪುರಾವೆ
  • ಆಧಾರ್ ಕಾರ್ಡ್
  • 10 ನೇ ತರಗತಿ ಅಂಕಪಟ್ಟಿ ಮತ್ತು ಪ್ರಮಾಣಪತ್ರ.
  • 12 ನೇ (ದ್ವಿತೀಯ ಪಿಯುಸಿ) ಅಂಕಪಟ್ಟಿ ಮತ್ತು ಪ್ರಮಾಣಪತ್ರ.
  • ಪದವಿ ಅಂಕಪಟ್ಟಿ ಮತ್ತು ಪ್ರಮಾಣಪತ್ರ.
  • ಡಿಪ್ಲೊಮಾ ಪ್ರಮಾಣಪತ್ರ. (ಡಿಪ್ಲೊಮಾ ಹೊಂದಿರುವವರಿಗೆ). *
  • ಜಾತಿ ಪ್ರಮಾಣ ಪತ್ರ. (ಅನ್ವಯವಾದಲ್ಲಿ) *
  • ಆದಾಯ ಪ್ರಮಾಣಪತ್ರ.
  • ಮೊಬೈಲ್ ನಂಬರ್
  • ಬ್ಯಾಂಕ್ ಖಾತೆ ವಿವರಗಳು.
  • ಸೆಲ್ಫ್ ಡಿಕ್ಲೆರೇಷನ್ ಪ್ರತಿ

Latest Trending

Follow us on Instagram Bangalore Today

One comment

Leave a Reply

Your email address will not be published. Required fields are marked *